ನೆಲ್ಯಾಡಿ ಕಾಲೇಜಿನ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ, ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

 


ಅಪ್ರಾಪ್ತ ವಯಸ್ಸಿನ  ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಇದೀಗ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.


ಕಡಬ ತಾಲೂಕಿನ ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಕಳೆದ ಜೂನ್.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಸತೀಶ್ ವಿದ್ಯಾರ್ಥಿನಿಯಲ್ಲಿ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ.


 ಇವರಿಬ್ಬರ ನಡುವೆ ಆತ್ಮೀಯತೆ ಹುಟ್ಟಿದ್ದಲ್ಲದೆ, ಕಳೆದ ಜುಲೈ. 21 ರಂದು ವಿದ್ಯಾರ್ಥಿನಿಯನ್ನು ನೆಲ್ಯಾಡಿಗೆ ಬರವುದಕ್ಕೆ ಹೇಳಿದ್ದ,  ನೆಲ್ಯಾಡಿಗೆ ಬಂದ ವಿದ್ಯಾರ್ಥಿನಿಯನ್ನು ಪಿಕಪ್ ವಾಹನವೊಂದರಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ,  ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು